Moving text

Mandya District Police

Press Note 02-06-2011

ಪತ್ರಿಕಾ ಪ್ರಕಟಣೆ

ಈ ಮೂಲಕ ಮಂಡ್ಯ ಜಿಲ್ಲೆಯ ಸಾರ್ವಜನಿಕರಿಗೆ ತಿಳಿಸುವುದೇನೆಂದರೆ ಇತ್ತೀಚೆಗೆ ಸುಮಾರು 25 ವರ್ಷ ವಯಸ್ಸಿನ ಹಿಂದಿ ಭಾಷೆಯಲ್ಲಿ ಮಾತನಾಡುವ ಯುವಕರು ಮೋಟಾರ್ ಸೈಕಲ್ ಮೇಲೆ ಹಳ್ಳಿಗಳಿಗೆ ಬಂದು ಚಿನ್ನದ ಒಡವೆಗಳನ್ನು ಬಿಸಿ ನೀರಿನಲ್ಲಿ ಹಾಕಿ, ಕುದಿಸಿ ಪಾಲಿಷ್ ಮಾಡಿಕೊಡುವುದಾಗಿ ಹೇಳಿ ಮಹಿಳೆಯರಿಂದ ಒಡವೆಗಳನ್ನು ಬಿಚ್ಚಿಸಿ ಬಿಸಿ ನೀರಿನಲ್ಲಿ ಹಾಕಿ ಕುದಿಸಿದ ಹಾಗೇ ಮಾಡಿ ನಂತರ ಮಹಿಳೆಯರ ಗಮನವನ್ನು ಬೇರೆ ಕಡೆ ಸೆಳೆದು ಒಡವೆಗಳನ್ನು ಕಳವು ಮಾಡಿಕೊಂಡು ಹೋಗುತ್ತಿರುವ ಪ್ರಕರಣಗಳು ವರದಿಯಾಗುತ್ತಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಅಪರಿಚಿತ ವ್ಯಕ್ತಿಗಳು ಮನೆಯ ಹತ್ತಿರ ಬಂದು ಚಿನ್ನದ ಒಡವೆಗಳನ್ನು ಪಾಲಿಷ್ ಮಾಡಿಕೊಡುವುದಾಗಿ ಹೇಳಿದ್ದನ್ನು ನಂಬಿ ಮೋಸ ಹೋಗಬಾರದಾಗಿ ಮತ್ತು ಅಂತಹ ವ್ಯಕ್ತಿಗಳ ಬಗ್ಗೆ ಮಾಹಿತಿ ತಿಳಿದುಬಂದರೆ ಹತ್ತಿರ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ವಿನಂತಿಸಲಾಗಿದೆ.

No comments:

Post a Comment